ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜನವರಿ 5ರಂದು ಕನಕದಾಸ ಜಯಂತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ ವೀಕ್ಷಣೆ

Spread the love

ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲಿ ಜನವರಿ 5 ರಂದು ನಡೆಯುತ್ತಿರುವ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನ ನಗರದ ಮಹಾಪೌರರಾದ ಕೆ. ಚಮನ್ ಸಾಬ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ ಅವರು ವೀಕ್ಷಿಸಿದರು.ಈ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಪರಮಪೂಜ್ಯರು ಆಗಮಿಸುತ್ತಿರುವ ಕಾರಣ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಸಮಾಲೋಚನೆ ನಡೆಸಿ ಸ್ಥಳದಲ್ಲಿ ಪೂರ್ವಸಿದ್ಧತೆಯ ಬಗ್ಗೆ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್, ಎಸ್. ಮಲ್ಲಿಕಾರ್ಜುನ್, ಉಮೇಶ್, ರಾಕೇಶ್ ಡಿ., ಕವಿತಾ ಚಂದ್ರಶೇಖರ್ ಮುಂತಾದವರಿದ್ದರು.

Leave a Reply

Your email address will not be published. Required fields are marked *